Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:20 - ಪರಿಶುದ್ದ ಬೈಬಲ್‌

20 ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:20
9 ತಿಳಿವುಗಳ ಹೋಲಿಕೆ  

ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.


ಆದರೆ ನೀನು ಜೆರುಸಲೇಮಿಗೆ ಹಿಂದಿರುಗಿ ಹೋದರೆ, ನೀನು ಅಹೀತೋಫೆಲನ ಸಲಹೆಗಳನ್ನು ನಿರರ್ಥಕಗೊಳಿಸುವೆ. ನೀನು ಅಬ್ಷಾಲೋಮನಿಗೆ, ‘ರಾಜನೇ, ನಾನು ನಿನ್ನ ಸೇವಕ. ನಾನು ನಿನ್ನ ತಂದೆಯ ಸೇವೆಯನ್ನು ಮಾಡಿದೆನು. ಆದರೆ ಈಗ ನಿನ್ನ ಸೇವೆಯನ್ನು ಮಾಡುತ್ತೇನೆ’ ಎಂದು ಹೇಳು.


ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ.


“ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು