Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:15 - ಪರಿಶುದ್ದ ಬೈಬಲ್‌

15 ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಷಾಲೋಮನನ್ನು ಸುತ್ತುವರಿದು ಅವನನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:15
9 ತಿಳಿವುಗಳ ಹೋಲಿಕೆ  

ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.


ಯೋವಾಬನು ತುತೂರಿಯನ್ನು ಊದಿ, ಅಬ್ಷಾಲೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು.


ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’


ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.


ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.


ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.


ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು