20 ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು.
20 ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
20 ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ
20 ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ
20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.
ಕಾವಲುಗಾರನು, “ಮೊದಲನೆಯ ಮನುಷ್ಯನು ಓಡುತ್ತಿರುವುದು ಚಾದೋಕನ ಮಗನಾದ ಅಹೀಮಾಚನಂತಿದೆಯೆಂದು ನನ್ನ ಭಾವನೆ” ಎಂದು ಹೇಳಿದನು. ರಾಜನು, “ಅಹೀಮಾಚನು ಒಳ್ಳೆಯ ಮನುಷ್ಯ. ಅವನು ಶುಭಸಮಾಚಾರವನ್ನು ತರುತ್ತಿರಬೇಕು” ಎಂದನು.
ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು.
ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.
ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು.