2 ಸಮುಯೇಲ 18:31 - ಪರಿಶುದ್ದ ಬೈಬಲ್31 ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಷ್ಟರಲ್ಲಿ ಕೂಷ್ಯನೂ ಬಂದು - ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ; ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.