Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:12 - ಪರಿಶುದ್ದ ಬೈಬಲ್‌

12 ನೀವು ನನ್ನ ಸೋದರರು, ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ?’ ಎಂದು ಹೇಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಲ್ಲಾ; ಆದದರಿಂದ ನನ್ನನ್ನು ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದು ಒಳ್ಳೇದಲ್ಲ ಎಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:12
9 ತಿಳಿವುಗಳ ಹೋಲಿಕೆ  

ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.


ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ.


ಶೆಕೆಮಿನ ಹಿರಿಯರಿಗೆ, “‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ನಾನೊಬ್ಬನೇ ನಿಮ್ಮನ್ನು ಆಳುವುದು ಒಳ್ಳೆಯದೋ’ ಎಂಬ ಪ್ರಶ್ನೆಯನ್ನು ಕೇಳಿದ್ದಲ್ಲದೆ ನಾನು ನಿಮ್ಮ ರಕ್ತಸಂಬಂಧಿ ಎಂಬುದನ್ನು ನೆನಪಿಡಿ” ಎಂದು ಹೇಳಿದನು.


ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.


ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.


ನಂತರ ಲಾಬಾನನು, “ಇದು ಆಶ್ಚರ್ಯವಾಗಿದೆ; ನೀನು ನನ್ನ ಸ್ವಂತ ಕುಟುಂಬದವನು” ಎಂದು ಹೇಳಿದನು. ಆದ್ದರಿಂದ ಯಾಕೋಬನು ಲಾಬಾನನೊಡನೆ ಒಂದು ತಿಂಗಳವರೆಗೆ ಇದ್ದನು.


ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.


ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.


ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು