2 ಸಮುಯೇಲ 19:14 - ಪರಿಶುದ್ದ ಬೈಬಲ್14 ದಾವೀದನ ಮಾತುಗಳು ಯೆಹೂದದ ಜನರೆಲ್ಲರ ಹೃದಯಗಳಿಗೆ ತಾಕಿದವು, ಅವರೆಲ್ಲರೂ ಒಂದೇ ಮನಸ್ಸಿನಿಂದ ಒಪ್ಪಿಕೊಂಡರು. ಯೆಹೂದದ ಜನರು ರಾಜನಿಗೆ, “ನೀನು ನಿನ್ನ ಸೇವಕರೆಲ್ಲರೊಡನೆ ಹಿಂದಿರುಗಿ ಬಾ” ಎಂಬ ಸಂದೇಶವೊಂದನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.