Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:18 - ಪರಿಶುದ್ದ ಬೈಬಲ್‌

18 ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:18
10 ತಿಳಿವುಗಳ ಹೋಲಿಕೆ  

ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು.


ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.


“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.


ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.


ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.


ಮೆಫೀಬೋಶೆತನು ರಾಜನಿಗೆ, “ಚೀಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು