Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:19 - ಪರಿಶುದ್ದ ಬೈಬಲ್‌

19 ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 :ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:19
17 ತಿಳಿವುಗಳ ಹೋಲಿಕೆ  

ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.


ತಾಮಾರಳ ಸೋದರನಾದ ಅಬ್ಷಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನು ನಿನ್ನನ್ನು ಕೆಡಿಸಿ ಬಿಟ್ಟನಲ್ಲವೇ? ಅಮ್ನೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಷಾಲೋಮನ ಮನೆಯಲ್ಲಿ ವಾಸಿಸಲು ಹೋದಳು.


ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.


ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು