Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:28 - ಪರಿಶುದ್ದ ಬೈಬಲ್‌

28 ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:28
12 ತಿಳಿವುಗಳ ಹೋಲಿಕೆ  

ಮೆಫೀಬೋಶೆತನ ಎರಡೂ ಕಾಲುಗಳು ಕುಂಟಾಗಿದ್ದವು. ಮೆಫೀಬೋಶೆತನು ಜೆರುಸಲೇಮಿನಲ್ಲಿ ನೆಲೆಸಿದ್ದನು. ಅವನು ಪ್ರತಿದಿನವೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.


ಏಳು ವರ್ಷಗಳು ಮುಗಿದ ನಂತರ ಆ ಸ್ತ್ರೀಯು ಫಿಲಿಷ್ಟಿಯರ ದೇಶದಿಂದ ಹಿಂದಿರುಗಿ ಬಂದಳು. ಆ ಸ್ತ್ರೀಯು ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಮತ್ತೆ ಕೊಡಿಸುವಂತೆ ಕೇಳಲು ರಾಜನ ಬಳಿಗೆ ಹೋದಳು.


ನೀನು ದೊಡ್ಡ ತಪ್ಪನ್ನು ಮಾಡಿದೆ! ಯೆಹೋವನಾಣೆ, ನೀನು ಮತ್ತು ನಿನ್ನ ಜನರು ಸಾಯಲೇಬೇಕಾಗಿತ್ತು. ಏಕೆನ್ನುವಿಯೊ? ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾದ ನಿನ್ನ ಒಡೆಯನನ್ನು ನೀನು ರಕ್ಷಿಸಲಾಗಲಿಲ್ಲ. ಸೌಲನ ತಲೆಯ ಹತ್ತಿರವಿದ್ದ ಭರ್ಜಿ ಮತ್ತು ನೀರಿನ ತಂಬಿಗೆಯನ್ನು ಹುಡುಕಿರಿ, ಅವು ಎಲ್ಲಿಗೆ ಹೋದವು?” ಎಂದು ಕೇಳಿದನು.


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.


ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.


ಈ ವಿಷಯಗಳ ಬಗ್ಗೆ ನಿಮ್ಮ ದೃಷ್ಟಿಯು ಬದಲಾಗಲೆಂಬುದಕ್ಕಾಗಿ ಯೋವಾಬನು ಹೀಗೆ ಮಾಡಿದನು. ನನ್ನ ಒಡೆಯನೇ, ನೀನು ದೇವದೂತನಂತೆ ಬುದ್ಧಿವಂತನಾಗಿರುವೆ. ಈ ಲೋಕದಲ್ಲಿ ನಡೆಯುತ್ತಿರುವುದೆಲ್ಲವನ್ನೂ ನೀನು ತಿಳಿದಿರುವೆ” ಎಂದಳು.


ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು.


ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕೆಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು