Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:41 - ಪರಿಶುದ್ದ ಬೈಬಲ್‌

41 ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:41
7 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರು ತಮ್ಮ ಸೈನಿಕರೆಲ್ಲರನ್ನು ಒಂದು ಕಡೆ ಸೇರಿಸಿದರು. ಆಮೇಲೆ ಅವರು ನದಿಯನ್ನು ದಾಟಿ ಝಾಫೋನ್ ನಗರಕ್ಕೆ ಬಂದರು. ಅವರು ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧ ಮಾಡುವಾಗ ಸಹಾಯಕ್ಕಾಗಿ ನಮ್ಮನ್ನು ಏಕೆ ಕರೆಯಲಿಲ್ಲ? ನಿನ್ನನ್ನು ಮನೆಯೊಳಗೆ ಹಾಕಿ ನಿನ್ನ ಮನೆಯನ್ನು ಸುಟ್ಟುಬಿಡುತ್ತೇವೆ” ಅಂದರು.


ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.


ಜನರು ನಾಚಿಕೆಯಿಂದ ನಗರದೊಳಕ್ಕೆ ಸದ್ದಿಲ್ಲದೆ ಬಂದರು. ಅವರು ಯುದ್ಧದಲ್ಲಿ ಸೋತುಬಂದವರಂತೆ ಕಾಣುತ್ತಿದ್ದರು.


ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.


ನೀವು ನನ್ನ ಸೋದರರು, ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ?’ ಎಂದು ಹೇಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು