Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:16 - ಪರಿಶುದ್ದ ಬೈಬಲ್‌

16 ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:16
7 ತಿಳಿವುಗಳ ಹೋಲಿಕೆ  

ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.


ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.


ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.


ಆ ಕುಲದವರಿಗೆ ಕೊಟ್ಟ ಭೂಮಿಯಿದು: ಹೆಲ್ಕತ್, ಹಲೀ ಬೆಟೆನ್, ಆಕ್ಷಾಫ್,


ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.


ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.


ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು