Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:4 - ಪರಿಶುದ್ದ ಬೈಬಲ್‌

4 ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:4
16 ತಿಳಿವುಗಳ ಹೋಲಿಕೆ  

ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.


ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.


ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.


ಈ ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.


ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.


ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.


ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:


ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.


ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಈ ಜನರು ಯೆಹೋವಾಷಾನನ್ನು ಹೊರಗೆ ತಂದರು. ಅವರು ಯೆಹೋವಾಷನ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟರು. ನಂತರ ಅವರು ಅವನನ್ನು ಅಭಿಷೇಕಿಸಿ, ನೂತನ ರಾಜನನ್ನಾಗಿ ಮಾಡಿದರು. ಅವರು ಚಪ್ಪಾಳೆ ತಟ್ಟುತ್ತಾ “ರಾಜನು ಚಿರಂಜೀವಿಯಾಗಿರಲಿ!” ಎಂದು ಆರ್ಭಟಿಸಿದರು.


ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು