Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:1 - ಪರಿಶುದ್ದ ಬೈಬಲ್‌

1 ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:1
31 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


ರಾಜನಾದ ರೆಹಬ್ಬಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದ್ದರಿಂದ ಇಸ್ರೇಲರೇ, ನಾವು ನಮ್ಮನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದವರನ್ನೇ ಆಳಲಿ” ಎಂದು ಹೇಳಿ ಸೇರಿಬಂದವರನ್ನೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು.


ನಿಮ್ಮ ಸ್ವಂತ ದೇಶದಲ್ಲಿರುವ ಕೆಲವು ಕೆಟ್ಟ ಜನರು ಕೆಟ್ಟದ್ದನ್ನು ಮಾಡಲು ತಮ್ಮ ಪಟ್ಟಣದ ಜನರನ್ನು ಒತ್ತಾಯಪಡಿಸುತ್ತಿದ್ದಾರೆಂದು ನೀವು ಕೇಳಬಹುದು. ಅವರು ತಮ್ಮ ಪಟ್ಟಣದ ಜನರಿಗೆ, ‘ನಾವು ಹೋಗಿ ಬೇರೆ ದೇವರುಗಳ ಸೇವೆಮಾಡೋಣ’ ಎಂದು ಹೇಳಬಹುದು. (ಈ ದೇವರುಗಳನ್ನು ನೀವು ಹಿಂದೆಂದೂ ತಿಳಿದಿಲ್ಲ.)


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು.


“ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.


ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.


ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು.


ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.


ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.


ಬೆನ್ಯಾಮೀನನ ಗಂಡುಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಎಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!


ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.


ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.


ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.


ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.”


ನೊವೊಮಿಯು, “ಆಗಲಿ ಮಗಳೇ, ಹಾಗೆಯೇ ಮಾಡು” ಅಂದಳು. ರೂತಳು ಹೊಲಗಳಿಗೆ ಹೋದಳು. ಅವಳು ಅಲ್ಲಿ ಫಸಲು ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾಯುತ್ತಾ ಎಲೀಮೆಲೆಕನ ಗೋತ್ರದವನಾದ ಬೋವಜನ ಹೊಲಕ್ಕೆ ಬಂದಳು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು