Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:10 - ಪರಿಶುದ್ದ ಬೈಬಲ್‌

10 ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:10
13 ತಿಳಿವುಗಳ ಹೋಲಿಕೆ  

ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲತೊಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಆ ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.


ಇವರು ತಮ್ಮ ಎಡಗೈಯಿಂದಲೂ ಬಲಗೈಯಿಂದಲೂ ಬಿಲ್ಲುಗಳಿಂದ ಬಾಣಗಳನ್ನೂ ಕವಣೆಗಳಿಂದ ಕಲ್ಲುಗಳನ್ನೂ ಗುರಿಯಿಟ್ಟು ಹೊಡೆಯಬಲ್ಲವರಾಗಿದ್ದರು. ಇವರೆಲ್ಲರೂ ಬೆನ್ಯಾಮೀನನ ಕುಲದವನಾದ ಸೌಲನ ಕುಟುಂಬದವರು. ಅವರ ಹೆಸರುಗಳು ಇಂತಿವೆ:


ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.


ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು