Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:17 - ಪರಿಶುದ್ದ ಬೈಬಲ್‌

17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:17
14 ತಿಳಿವುಗಳ ಹೋಲಿಕೆ  

ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.


ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.


ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.


ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು