Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:9 - ಪರಿಶುದ್ದ ಬೈಬಲ್‌

9 ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:9
13 ತಿಳಿವುಗಳ ಹೋಲಿಕೆ  

ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೆತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.


ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.


ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.


ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.


ಆದರೆ ಗೋಧಿಯೂ ಕಡಲೆಯೂ ಬೇರೆ ಧಾನ್ಯಗಳ ನಂತರ ಆಗುವ ಬೆಳೆಗಳಾಗಿದ್ದವು. ಆದ್ದರಿಂದ ಈ ಪೈರುಗಳು ನಾಶವಾಗಲಿಲ್ಲ.


ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


“ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು