Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:11 - ಪರಿಶುದ್ದ ಬೈಬಲ್‌

11 ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ ಕಾಣಿಸಿಕೊಂಡನು ವಾಯುರೆಕ್ಕೆಗಳ ವೇಗದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:11
13 ತಿಳಿವುಗಳ ಹೋಲಿಕೆ  

ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.


ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ.


ಯೆಹೋವನೇ ರಾಜನು! ಜನಾಂಗಗಳು ಭಯದಿಂದ ನಡುಗಲಿ. ಆತನು ಕೆರೂಬಿಗಳ ಮೇಲೆ ರಾಜನಂತೆ ಕುಳಿತುಕೊಂಡಿದ್ದಾನೆ. ಭೂಮಿಯು ಭಯದಿಂದ ನಡುಗಲಿ.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.


ಆ ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.


ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು.


ಅಲ್ಲದೆ ಏದೆನ್ ತೋಟವನ್ನು ಸಂರಕ್ಷಿಸುವುದಕ್ಕಾಗಿ ಆತನು ಕೆರೂಬಿದೂತರನ್ನು ತೋಟದ ಪೂರ್ವಭಾಗದಲ್ಲಿ ಇರಿಸಿದನು. ಇದಲ್ಲದೆ ಆತನು ಬೆಂಕಿಯ ಖಡ್ಗವನ್ನು ಅಲ್ಲಿಟ್ಟನು. ಈ ಖಡ್ಗವು ಎಲ್ಲಾ ದಿಕ್ಕುಗಳತ್ತ ತಿರುಗುತ್ತಾ ಧಗಧಗನೆ ಪ್ರಜ್ವಲಿಸುತ್ತಾ ಜೀವದಾಯಕ ಮರದ ಮಾರ್ಗವನ್ನು ಕಾಯುತ್ತಿತ್ತು.


ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು