Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:48 - ಪರಿಶುದ್ದ ಬೈಬಲ್‌

48 ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:48
11 ತಿಳಿವುಗಳ ಹೋಲಿಕೆ  

ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.


ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು.


ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಈಗ ಓಡುತ್ತಾಹೋಗಿ ರಾಜನಾದ ದಾವೀದನಿಗೆ ಈ ವರ್ತಮಾನವನ್ನು ತಿಳಿಸುತ್ತೇನೆ. ಯೆಹೋವನು ನಿನ್ನ ಶತ್ರುವನ್ನು ನಾಶಮಾಡಿದನೆಂದು ನಾನು ಅವನಿಗೆ ಹೇಳುತ್ತೇನೆ” ಎಂದನು.


ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.


ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ


ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.


ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು