Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:51 - ಪರಿಶುದ್ದ ಬೈಬಲ್‌

51 ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:51
18 ತಿಳಿವುಗಳ ಹೋಲಿಕೆ  

ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.


ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ದಾವೀದನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಸೂರ್ಯನು ಇರುವವರೆಗೂ ಇರುವುದು.


ಅವನು ನನಗೆ, ‘ನೀನೇ ನನ್ನ ತಂದೆ; ನೀನೇ ನನ್ನ ದೇವರು. ನೀನೇ ನನ್ನ ಬಂಡೆ; ನೀನೇ ನನ್ನ ರಕ್ಷಕ’ ಎಂದು ಹೇಳುವನು.


ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.


ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.


ನಾನು ಆರಿಸಿಕೊಂಡ ರಾಜನನ್ನು ಯಾವಾಗಲೂ ಪ್ರೀತಿಸುವೆನು; ಅವನಿಗೆ ಬೆಂಬಲ ನೀಡುವೆನು. ನಾನು ಅವನನ್ನು ಯಾವಾಗಲೂ ಬಲಗೊಳಿಸುವೆನು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು