Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:16 - ಪರಿಶುದ್ದ ಬೈಬಲ್‌

16 ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲೊಲ್ಲದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:16
12 ತಿಳಿವುಗಳ ಹೋಲಿಕೆ  

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು