Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:18 - ಪರಿಶುದ್ದ ಬೈಬಲ್‌

18 ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:18
11 ತಿಳಿವುಗಳ ಹೋಲಿಕೆ  

ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.


ಬಳಿಕ ಯೋವಾಬನು ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು ಅಮ್ಮೋನಿಯರ ವಿರುದ್ಧ ಹೋರಾಡಲು ಕಳುಹಿಸಿದನು.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಅವರ ತಂಗಿಯಂದಿರು ಯಾರೆಂದರೆ, ಚೆರೂಯ ಮತ್ತು ಅಬೀಗೈಲ್, ಚೆರೂಯಳ ಮೂರುಮಕ್ಕಳು ಯಾರೆಂದರೆ, ಅಬ್ಷೈ, ಯೋವಾಬ್ ಮತ್ತು ಅಸಾಹೇಲ್.


ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.


ಅಸಾಹೇಲನನ್ನು ಗಿಬ್ಯೋನ್ ಯುದ್ಧದಲ್ಲಿ ಅಬ್ನೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದರು.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.


ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು