Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:3 - ಪರಿಶುದ್ದ ಬೈಬಲ್‌

3 ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:3
27 ತಿಳಿವುಗಳ ಹೋಲಿಕೆ  

ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು: “ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲೂ ಇರುವುದು. ನೀನು ನಿನ್ನ ರಾಜ್ಯವನ್ನು ಸಮರ್ಪಕವಾದ ತೀರ್ಪುಗಳೊಡನೆ ಆಳುವೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನಿನ್ನ ಜನರಿಗೆ ನೀತಿಯಿಂದಲೂ ನಿನ್ನ ಬಡಜನರಿಗೆ ನ್ಯಾಯವಾಗಿಯೂ ತೀರ್ಪುಮಾಡಲು ಅವನಿಗೆ ಸಹಾಯಮಾಡು.


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು.


ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.


ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.


ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.


ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ?


ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.


ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು