Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:9 - ಪರಿಶುದ್ದ ಬೈಬಲ್‌

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:9
12 ತಿಳಿವುಗಳ ಹೋಲಿಕೆ  

ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


ಆಗ ಯೇಸುವಿನ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.


ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.


ಅಬೀಷೂವ, ನಾಮಾನ್, ಅಹೋಹ, ಗೇರ ಶೆಫೂಫಾನ್ ಮತ್ತು ಹೂರಾಮ್.


ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು