Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:1 - ಪರಿಶುದ್ದ ಬೈಬಲ್‌

1 ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:1
23 ತಿಳಿವುಗಳ ಹೋಲಿಕೆ  

ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.


ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.


ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನ್ನು ಕೊಟ್ಟೆನು. ಜೀವವನ್ನು ಕೊಡಲು ಅಸಾಧ್ಯವಾದ ನಿಯಮಗಳನ್ನು ವಿಧಿಸಿದೆನು.


ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.


“ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ಈ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ.


ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.


ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ.


ಆದರೆ ಆ ಜನರು ಸತ್ಯವನ್ನು ಪ್ರೀತಿಸಲಿಲ್ಲ. ಆದಕಾರಣ, ಸತ್ಯವನ್ನು ತೊರೆದು, ಸತ್ಯವಲ್ಲದ್ದನ್ನು ನಂಬುವಂತೆ ಮಾಡುವ ಶಕ್ತಿಯೊಂದನ್ನು ದೇವರು ಅವರ ಬಳಿಗೆ ಕಳುಹಿಸುತ್ತಾನೆ.


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮೋಶೆಯು ಮಾಡಿದನು. ಜನರು ಸೀನಾಯಿ ಮರುಭೂಮಿಯಲ್ಲಿದ್ದಾಗ ಮೋಶೆಯು ಅವರನ್ನು ಲೆಕ್ಕಿಸಿದನು.


ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.


ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು.


ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು