Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:13 - ಪರಿಶುದ್ದ ಬೈಬಲ್‌

13 ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:13
20 ತಿಳಿವುಗಳ ಹೋಲಿಕೆ  

ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.


“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.


“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.


ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೋಗಿ ಹೇಳು, ‘ಯೆಹೋವನು ಹೀಗೆ ಹೇಳುತ್ತಾನೆ, ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೋ’” ಎಂದು ಹೇಳಿದನು.


ಯೆಹೋವನು ನೈಲ್ ನದಿಯ ನೀರನ್ನು ರಕ್ತವನ್ನಾಗಿ ಮಾರ್ಪಡಿಸಿದ ಬಳಿಕ ಏಳು ದಿನಗಳು ಕಳೆದವು.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು