2 ಸಮುಯೇಲ 24:15 - ಪರಿಶುದ್ದ ಬೈಬಲ್15 ಆದ್ದರಿಂದ ಯೆಹೋವನು ಇಸ್ರೇಲಿಗೆ ರೋಗರುಜಿನಗಳನ್ನು ಬರಮಾಡಿದನು. ಇವು ಹೊತ್ತಾರೆಯಿಂದ ಆರಂಭವಾಗಿ ನಿಯಮಿತಕಾಲದವರೆಗೆ ಮುಂದುವರಿದವು. ದಾನ್ನಿಂದ ಬೇರ್ಷೆಬದವರೆಗೆ ಎಪ್ಪತ್ತುಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನ ವರೆಗೂ ಇತ್ತು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ಅಧ್ಯಾಯವನ್ನು ನೋಡಿ |
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.