Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:21 - ಪರಿಶುದ್ದ ಬೈಬಲ್‌

21 ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:21
11 ತಿಳಿವುಗಳ ಹೋಲಿಕೆ  

ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು ಆತನು (ಯೆಹೋವನು) ಆ ಕಾಯಿಲೆಯನ್ನು ನಿಲ್ಲಿಸಿದನು.


ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.


ಆ ದಿನ ಗಾದನು ದಾವೀದನ ಬಳಿಗೆ ಬಂದು, “ಹೋಗಿ, ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸು” ಎಂದು ಹೇಳಿದನು.


ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.


ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.


ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು