Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:25 - ಪರಿಶುದ್ದ ಬೈಬಲ್‌

25 ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:25
16 ತಿಳಿವುಗಳ ಹೋಲಿಕೆ  

ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.


ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಆದ್ದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗಹೋಮವನ್ನು ಅರ್ಪಿಸಿದನು.


ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.


ಆ ಕಾಲದಲ್ಲಿ ರಾಜನಾದ ದಾವೀದನು ಬಹಳ ಮುದುಕನಾಗಿದ್ದನು. ಅವನ ದೇಹವು ಬೆಚ್ಚಗಾಗುತ್ತಲೇ ಇರಲಿಲ್ಲ. ಅವನ ಸೇವಕರು ಅವನಿಗೆ ಕಂಬಳಿಗಳನ್ನು ಹೊದಿಸಿದರೂ ಅವನ ದೇಹವು ತಣ್ಣಗೇ ಇರುತ್ತಿತ್ತು.


ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.


ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು