Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:12 - ಪರಿಶುದ್ದ ಬೈಬಲ್‌

12 ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:12
15 ತಿಳಿವುಗಳ ಹೋಲಿಕೆ  

ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.


ದಾವೀದನ ಮಾತುಗಳು ಯೆಹೂದದ ಜನರೆಲ್ಲರ ಹೃದಯಗಳಿಗೆ ತಾಕಿದವು, ಅವರೆಲ್ಲರೂ ಒಂದೇ ಮನಸ್ಸಿನಿಂದ ಒಪ್ಪಿಕೊಂಡರು. ಯೆಹೂದದ ಜನರು ರಾಜನಿಗೆ, “ನೀನು ನಿನ್ನ ಸೇವಕರೆಲ್ಲರೊಡನೆ ಹಿಂದಿರುಗಿ ಬಾ” ಎಂಬ ಸಂದೇಶವೊಂದನ್ನು ಕಳುಹಿಸಿದರು.


ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತುಪಡಿಸಿದೆ. ಇಂದು ಅಬ್ಷಾಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳುತ್ತಿದ್ದೆ ಎಂಬುದನ್ನು ನಾನು ಈ ದಿನ ಕಂಡುಕೊಂಡೆನು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಅಬ್ನೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲಾ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ನೇರನನ್ನು ಕಳುಹಿಸಿದನು. ಅಬ್ನೇರನು ಸಮಾಧಾನದಿಂದ ಹೋದನು.


ಈಷ್ಬೋಶೆತನು ಅಬ್ನೇರನಿಗೆ ಏನನ್ನೂ ಹೇಳಿಲಿಲ್ಲ. ಈಷ್ಬೋಶೆತನು ಅವನಿಗೆ ಬಹಳ ಭಯಪಟ್ಟನು.


ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.


ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು