Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:25 - ಪರಿಶುದ್ದ ಬೈಬಲ್‌

25 ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:25
16 ತಿಳಿವುಗಳ ಹೋಲಿಕೆ  

ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.


ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ಸಫಲ ಹೊಂದುವಂತೆ ಆಶೀರ್ವದಿಸುವನು.


“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಫರಿಸಾಯರು, “ಹಾಗಾದರೆ, ಯೇಸು ನಿಮ್ಮನ್ನು ಸಹ ಮರುಳುಗೊಳಿಸುತ್ತಿದ್ದಾನೆ!


ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.


ನೀನು ಹೋಗುವಾಗಲೂ ಬರುವಾಗಲೂ ಯೆಹೋವನು ನಿನಗೆ ಸಹಾಯಮಾಡುವನು. ಆತನು ನಿನ್ನನ್ನು ಸದಾಕಾಲ ಕಾಪಾಡುವನು.


ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.


ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.


ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.


ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು.


ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.


ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?


ಯೋವಾಬನು ದಾವೀದನನ್ನು ಬಿಟ್ಟು, ಅಬ್ನೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ನೇರನನ್ನು ದೂತರು ಹಿಂದಕ್ಕೆ ಕರೆತಂದರು. ಈ ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು