Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:27 - ಪರಿಶುದ್ದ ಬೈಬಲ್‌

27 ಅಬ್ನೇರನು ಹೆಬ್ರೋನಿಗೆ ಬಂದಾಗ, ಯೋವಾಬನು ಅವನ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತನಾಡುವುದಕ್ಕಾಗಿ ಊರಬಾಗಿಲಿನ ಒಂದು ಪಕ್ಕಕ್ಕೆ ಕರೆದುಕೊಂಡು ಹೋದನು. ಆದರೆ ಯೋವಾಬನು ಅಬ್ನೇರನ ಹೊಟ್ಟೆಗೆ ತಿವಿದಿದ್ದರಿಂದ ಅವನು ಸತ್ತನು. ಹಿಂದೆ, ಅಬ್ನೇರನು ಯೋವಾಬನ ಸೋದರನಾದ ಅಸಾಹೇಲನನ್ನು ಕೊಂದಿದ್ದನು. ಆದ್ದರಿಂದ ಯೋವಾಬನು ಅಬ್ನೇರನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:27
16 ತಿಳಿವುಗಳ ಹೋಲಿಕೆ  

“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


“ಲೇವಿಯರು, ‘ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದವನು ಹಿಡಿಯಲ್ಪಡದಿದ್ದರೂ ಸಹ ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ


ಯೋವಾಬನು ದಾವೀದನನ್ನು ಬಿಟ್ಟು, ಅಬ್ನೇರನನ್ನು ಸಿರಾ ಬಾವಿಯ ಬಳಿಯಿಂದ ಕರೆತರಲು ದೂತರನ್ನು ಕಳುಹಿಸಿದನು. ಅಬ್ನೇರನನ್ನು ದೂತರು ಹಿಂದಕ್ಕೆ ಕರೆತಂದರು. ಈ ಸಂಗತಿಯು ದಾವೀದನಿಗೆ ತಿಳಿದಿರಲಿಲ್ಲ.


ತರುವಾಯ ದಾವೀದನಿಗೆ ಸುದ್ದಿಯು ತಿಳಿಯಿತು. ದಾವೀದನು, “ನನ್ನ ರಾಜ್ಯವಾಗಲಿ ನಾನಾಗಲಿ ನೇರನ ಮಗನಾದ ಅಬ್ನೇರನ ಸಾವಿಗೆ ಕಾರಣರಲ್ಲ. ಯೆಹೋವನಿಗೆ ಇದು ತಿಳಿದಿದೆ.


ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು.


ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.


ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು.


ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.


ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗ ಯಗಸೀಯೇಲ್.


ದ್ವೇಷವು ತನ್ನನ್ನು ಮೋಸದಿಂದ ಮರೆಮಾಡಿಕೊಳ್ಳುತ್ತದೆ. ಆದರೆ ಅವನು ಕೀಳಾದವನು; ಕೊನೆಯಲ್ಲಿ, ಅವನ ಕೆಟ್ಟಕಾರ್ಯಗಳನ್ನು ಜನರೆಲ್ಲರೂ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು