Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:10 - ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:10
19 ತಿಳಿವುಗಳ ಹೋಲಿಕೆ  

ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.


ಆದರೆ ಜೆರುಬ್ಬಾಬೆಲನೇ, ಯೆಹೋವನು ಹೀಗೆನ್ನುತ್ತಾನೆ, “ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ” ಎಂದು ಯೆಹೋವನು ಹೇಳುತ್ತಾನೆ.’” ಇದು ಸರ್ವಶಕ್ತನಾದ ಯೆಹೋವನ ನುಡಿ.


ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಜೊತೆಗಿದ್ದನು. ಆದ್ದರಿಂದ ಸೌಲನು ದಾವೀದನಿಗೆ ಭಯಪಟ್ಟನು.


ಯೆಹೋವನು ದಾವೀದನ ಜೊತೆಗಿದ್ದನು. ಆದ್ದರಿಂದ ದಾವೀದನು ಎಲ್ಲದರಲ್ಲೂ ಯಶ್ವಸಿಯಾದನು.


ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು