Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:6 - ಪರಿಶುದ್ದ ಬೈಬಲ್‌

6 ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನು ತನ್ನ ಜನರನ್ನು ಕರಕೊಂಡು ಯೆರೂಸಲೇವಿುನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರಲಾರನೆಂದು ನೆನಸಿ ದಾವೀದನಿಗೆ - ನೀನು ಒಳಗೆ ಬರಲಾರಿ; ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:6
13 ತಿಳಿವುಗಳ ಹೋಲಿಕೆ  

ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.


ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,


ಜೆರುಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನೊಂದಿಗೆ ಮಾತನಾಡಿದನು. ಅವನು ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ ಮತ್ತು ಎಗ್ಲೋನಿನ ಅರಸನಾದ ದೆಬೀರ್ ಇವರೊಂದಿಗೂ ಮಾತನಾಡಿದನು. ಜೆರುಸಲೇಮಿನ ಅರಸನು ಅವರಿಗೆ,


ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.


ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯಕೋಟೆಯನ್ನು ನಾಶಮಾಡಬಲ್ಲನು.


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು