Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:13 - ಪರಿಶುದ್ದ ಬೈಬಲ್‌

13 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಹೊತ್ತವರು ಆರು ಹೆಜ್ಜೆಗಳನ್ನು ನಡೆದು ನಿಂತಾಗ ದಾವೀದನು ಒಂದು ಹೋರಿಯನ್ನು ಮತ್ತು ಕೊಬ್ಬಿದ ಕರುವನ್ನು ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:13
9 ತಿಳಿವುಗಳ ಹೋಲಿಕೆ  

ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.


ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರೂ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ಒಟ್ಟಿಗೆ ಸೇರಿದರು. ಅವರು ಅಸಂಖ್ಯವಾದ ಕುರಿಗಳನ್ನು ಮತ್ತು ದನಗಳನ್ನು ಯಜ್ಞಗಳನ್ನಾಗಿ ಅರ್ಪಿಸಿದರು.


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.


“ಯಾಜಕರು ಮತ್ತು ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವುದನ್ನು ನೀವು ಕಾಣುವಾಗ ಅವರನ್ನು ಹಿಂಬಾಲಿಸಿರಿ.


ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.


ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.


“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು