Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:13 - ಪರಿಶುದ್ದ ಬೈಬಲ್‌

13 ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:13
39 ತಿಳಿವುಗಳ ಹೋಲಿಕೆ  

ಆದರೆ ನನ್ನ ಆಲಯವನ್ನು ನಿರ್ಮಿಸಲು ನಾನು ಆರಿಸಿಕೊಂಡಿರುವ ವ್ಯಕ್ತಿಯು ನೀನಲ್ಲ. ನಿನ್ನ ಮಗನೇ ನನ್ನ ಆಲಯವನ್ನು ನಿರ್ಮಿಸುತ್ತಾನೆ’ ಎಂದು ಹೇಳಿದನು.


“ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.


‘ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.’”


ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.


ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು.


ನಿಜವಾಗಿಯೂ ಅತ್ಯದ್ಭುತವಾದ ಆಲಯವನ್ನು ನಿನಗಾಗಿ ನಿರ್ಮಿಸಿರುವೆನು. ಈ ಸ್ಥಳದಲ್ಲಿ ನೀನು ಶಾಶ್ವತವಾಗಿ ನೆಲೆಸಿರಬಹುದು” ಎಂದು ಪ್ರಾರ್ಥನೆ ಮಾಡಿದನು.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ದೇವಾಲಯದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು