Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:2 - ಪರಿಶುದ್ದ ಬೈಬಲ್‌

2 ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:2
24 ತಿಳಿವುಗಳ ಹೋಲಿಕೆ  

ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ನಾತಾನನು ದಾವೀದನ ಬಳಿಗೆ ಬಂದು, “ಒಂದು ನಗರದಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಶ್ರೀಮಂತ. ಆದರೆ ಮತ್ತೊಬ್ಬನು ತೀರಾ ಬಡವ.


ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.


“ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.


“ಜನರೇ, ನೀವು ಅಂದವಾದ ಮನೆಗಳಲ್ಲಿ ವಾಸಮಾಡಲು ಇದು ತಕ್ಕ ಸಮಯವೆಂದು ಹೇಳುತ್ತೀರಿ. ನಿಮ್ಮ ಮನೆಗಳಲ್ಲಿ ಗೋಡೆಗೆ ಮರದ ಹಲಗೆಗಳನ್ನು ಹೊಡೆದಿದ್ದೀರಿ. ಆದರೆ ಯೆಹೋವನ ಮನೆಯು ಇನ್ನೂ ಹಾಳುಬಿದ್ದಿದೆ.


ಪ್ರಾರಂಭದಿಂದ ಹಿಡಿದು ಕೊನೆಯತನಕ ದಾವೀದನು ಮಾಡಿದ ಎಲ್ಲಾ ಕಾರ್ಯಗಳನ್ನು ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ ಮತ್ತು ದರ್ಶಿಯಾದ ಗಾದ್ ಇವರ ಚರಿತ್ರೆಗಳಲ್ಲಿ ಬರೆಯಲ್ಪಟ್ಟಿವೆ.


ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.


ಇಸ್ರೇಲರ ಶೂರನಾದ ದೇವರಿಗೆ ಒಂದು ಆಲಯವನ್ನು ಕಟ್ಟುವೆನು” ಎಂದು ದಾವೀದನು ಹೇಳಿದನು.


ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.


ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.


ಆ ದರ್ಶನದಲ್ಲಿ ದೇವರು ತನಗೆ ಹೇಳಿದ ಪ್ರತಿಯೊಂದನ್ನು ನಾತಾನನು ದಾವೀದನಿಗೆ ತಿಳಿಸಿದನು.


ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.


ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ರಾಜನೊಡನೆ ಬತ್ಷೆಬೆಳು ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಅವನನ್ನು ನೋಡಲು ಬಂದನು.


“ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು.


ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.


ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.


ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.


ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.


ದಾವೀದನು ಯೆಹೋವನಿಗೆ ವಿಶೇಷವಾದ ವಾಗ್ದಾನವನ್ನು ಮಾಡಿದನು; ಇಸ್ರೇಲರ ಶೂರನಾದ ದೇವರಿಗೆ ಆತನು ವಿಶೇಷವಾದ ಹರಕೆಯೊಂದನ್ನು ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು