Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:7 - ಪರಿಶುದ್ದ ಬೈಬಲ್‌

7 ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲಿ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ಕುಲದವರನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:7
19 ತಿಳಿವುಗಳ ಹೋಲಿಕೆ  

ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


‘ಯೆಹೂದ ಪ್ರಾಂತ್ಯದಲ್ಲಿರುವ ಬೆತ್ಲೆಹೇಮೇ, ಯೆಹೂದವನ್ನು ಆಳುವವರಲ್ಲಿ ನೀನು ಪ್ರಾಮುಖ್ಯವಾಗಿರುವೆ. ಹೌದು, ಅಧಿಪತಿಯೊಬ್ಬನು ನಿನ್ನೊಳಗಿಂದ ಬರುವನು. ನನ್ನ ಜನರಾದ ಇಸ್ರೇಲರನ್ನು ಆತನೇ ಮುನ್ನಡೆಸುವನು’” ಎಂದು ಉತ್ತರಕೊಟ್ಟರು.’”


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ಹೌದು, ನಾನು ನನ್ನ ಮಂದೆಯನ್ನು ಮೇಯಿಸಿ ಅವುಗಳನ್ನು ವಿಶ್ರಾಂತಿಯ ಸ್ಥಳಕ್ಕೆ ನಡೆಸುವೆನು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ನರಪುತ್ರನೇ, ನೀನು ಇಸ್ರೇಲರ ಕುರುಬರ ಸಂಗಡ ನನ್ನ ಪರವಾಗಿ ಮಾತನಾಡು. ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವರಿಗೆ ಹೇಳು, ‘ಇಸ್ರೇಲರ ಕುರುಬರೇ, ನೀವು ನೀವಾಗಿಯೇ ಹೊಟ್ಟೆ ತುಂಬಿಸಿಕೊಳ್ಳುತ್ತೀರಿ. ಇದು ಸರಿಯಲ್ಲ. ನಿಮ್ಮ ಮಂದೆಗೆ ನೀವು ಆಹಾರ ಯಾಕೆ ಒದಗಿಸುವುದಿಲ್ಲ?


ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.


ನಿಮಗೆ ಹೊಸ ಪಾಲಕರನ್ನು ನೇಮಿಸುವೆನು. ಆ ಪಾಲಕರು ನನಗೆ ನಂಬಿಗಸ್ತರಾಗಿರುತ್ತಾರೆ. ಅವರು ಬುದ್ಧಿ ಮತ್ತು ಜ್ಞಾನಗಳಿಂದ ನಿಮಗೆ ಮಾರ್ಗದರ್ಶನ ಮಾಡುತ್ತಾರೆ.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆ ಅಂದರು.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು