Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:1 - ಪರಿಶುದ್ದ ಬೈಬಲ್‌

1 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:1
14 ತಿಳಿವುಗಳ ಹೋಲಿಕೆ  

ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು “ಅಮ್ಮಾ” ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ “ಅಮ್ಮಾ” ಬೆಟ್ಟ.)


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.


ಇಸ್ರೇಲಿನ ಕುಲಗಳ ಜನರೆಲ್ಲರೂ ತಮ್ಮಲ್ಲೇ ಚರ್ಚಿಸಿದರು. ಅವರು, “ರಾಜನಾದ ದಾವೀದನು ಫಿಲಿಷ್ಟಿಯರಿಂದ ಮತ್ತು ಇತರ ಶತ್ರುಗಳಿಂದ ನಮ್ಮನ್ನು ರಕ್ಷಿಸಿದನು. ಅಬ್ಷಾಲೋಮನಿಂದಾಗಿ ದಾವೀದನು ಓಡಿಹೋಗಬೇಕಾಯಿತು.


ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!


ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು.


ಮೋವಾಬ್ ನನ್ನ ಸ್ನಾನಪಾತ್ರೆ. ಎದೋಮ್ ನನ್ನ ಪಾದರಕ್ಷೆಗಳ ಸ್ಥಳ. ನಾನು ಫಿಲಿಷ್ಟಿಯರನ್ನು ಸೋಲಿಸಿ ಜಯಘೋಷ ಮಾಡುವೆ.”


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.


ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.


ನೀನು ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿರುವೆ. ನಮ್ಮ ದೇಶವು ಕುಸಿದುಬೀಳುತ್ತಿದೆ; ಅದನ್ನು ಸರಿಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು