Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:17 - ಪರಿಶುದ್ದ ಬೈಬಲ್‌

17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:17
21 ತಿಳಿವುಗಳ ಹೋಲಿಕೆ  

ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.


ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.


ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.


ಚಾದೋಕ್ ಅಹೀಟೂಬನ ಮಗ, ಅಹಿಮಾಚನು ಚಾದೋಕನ ಮಗ.


ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.


ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.


ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಎಲ್ಲಾಜಾರನ ಮಗನು ಫೀನೆಹಾಸ. ಫೀನೆಹಾಸನ ಮಗನು ಅಬೀಷೂವ.


ಆ ಗುಂಪಿನಲ್ಲಿ ಚಾದೋಕನೂ ಇದ್ದನು. ಇವನೂ ಪರಾಕ್ರಮಶಾಲಿಯಾಗಿದ್ದನು. ಇವನು ತನ್ನ ಇಪ್ಪತ್ತೆರಡು ಮಂದಿ ಅಧಿಕಾರಿಗಳೊಂದಿಗೆ ಸೇರಿದನು.


ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.


ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.


ಹೂಷೈಯು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಆ ವಿಚಾರಗಳನ್ನು ಹೇಳಿದನು. ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆ ಅಹೀತೋಫೆಲನು ಮಾಡಿದ ಸಲಹೆಗಳ ವಿಚಾರವನ್ನು ಮತ್ತು ತಾನು ನೀಡಿದ ಸಲಹೆಗಳ ವರದಿಯನ್ನು, ಚಾದೋಕ ಮತ್ತು ಎಬ್ಯಾತಾರನಿಗೆ ತಿಳಿಸಿದನು.


ನೀವು ನನ್ನ ಸೋದರರು, ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ?’ ಎಂದು ಹೇಳಿ.


ಆದರೆ ಅವನು ನನ್ನನ್ನಾಗಲಿ ಯಾಜಕನಾದ ಚಾದೋಕನನ್ನಾಗಲಿ ಯೆಹೋಯಾದಾವನ ಮಗನಾದ ಬೆನಾಯನನ್ನಾಗಲಿ ನಿನ್ನ ಮಗನಾದ ಸೊಲೊಮೋನನನ್ನಾಗಲಿ ಆಹ್ವಾನಿಸಲಿಲ್ಲ.


ಅಜರ್ಯ. ಅಜರ್ಯನು ಹಿಲ್ಕೀಯನ ಮಗ; ಹಿಲ್ಕೀಯನು ಮೆಷುಲ್ಲಾಮನ ಮಗ; ಮೆಷುಲ್ಲಾಮನು ಚಾದೋಕನ ಮಗ; ಚಾದೋಕನು ಮೆರಾಯೋತನ ಮಗ; ಮೆರಾಯೋತನು ಅಹೀಟೂಬನ ಮಗ. ಅಹೀಟೂಬನು ದೇವಾಲಯದ ಒಬ್ಬ ವಿಶೇಷ ಅಧಿಕಾರಿಯಾಗಿದ್ದನು.


ಬೆನ್ಯಾಮೀನ್ ಕುಲದಿಂದ ಮೂರು ಸಾವಿರ ಮಂದಿ ಇದ್ದರು. ಇವರೆಲ್ಲಾ ಸೌಲನ ಸಂಬಂಧಿಕರು. ಇವರಲ್ಲಿ ಬಹು ಮಂದಿ ಸೌಲನು ಜೀವಿಸಿರುವಾಗ ಅವನೊಂದಿಗಿದ್ದರು.


ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್.


ಹಿಲ್ಕೀಯನು ಶಲ್ಲೂಮನ ಮಗನು. ಶಲ್ಲೂಮನು ಚಾದೋಕನ ಮಗನು; ಚಾದೋಕನು ಅಹೀಟೂಬನ ಮಗನು.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು