Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:8 - ಪರಿಶುದ್ದ ಬೈಬಲ್‌

8 ಹದದೆಜೆರನಿಗೆ ಸೇರಿದ ನಗರಗಳಾದ ಬೆಟಹ ಮತ್ತು ಬೇರೋತೈಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:8
9 ತಿಳಿವುಗಳ ಹೋಲಿಕೆ  

ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.


ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.


ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು.


ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.


ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು