Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:1 - ಪರಿಶುದ್ದ ಬೈಬಲ್‌

1 ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:1
15 ತಿಳಿವುಗಳ ಹೋಲಿಕೆ  

ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.


“ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.


ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.


“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.


ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”


ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.


ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು