Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:16 - ಪರಿಶುದ್ದ ಬೈಬಲ್‌

16-17 “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಭಾವಾನು ಅನಿ ಭೆನಿಯಾನು ದಾವಿದಾಚ್ಯಾ ತೊಂಡಾತ್ನಾ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಚ್ಯಾ ವಿಶಯಾತ್ ಲಿವಲ್ಲೆ ಖರೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:16
38 ತಿಳಿವುಗಳ ಹೋಲಿಕೆ  

ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


‘ಅವನ ಮನೆ ಹಾಳಾಗಲಿ! ಅಲ್ಲಿ ಯಾರೂ ವಾಸಿಸದಂತಾಗಲಿ!’ ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ. ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’ ಎಂದು ಸಹ ಬರೆದಿದೆ.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಆದರೆ ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದು ಈ ರೀತಿಯಲ್ಲೇ ಆಗಬೇಕಾಗಿದೆ” ಎಂದು ಹೇಳಿದನು.


ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.


ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.


ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


ಯೇಸು ಮಾತಾಡುತ್ತಿದ್ದಾಗ, ಜನರ ಒಂದು ಗುಂಪು ಅಲ್ಲಿಗೆ ಬಂದಿತು. ಹನ್ನೆರಡು ಅಪೊಸ್ತಲರಲ್ಲಿ ಒಬ್ಬನು ಆ ಗುಂಪಿಗೆ ಮುಂದಾಳಾಗಿದ್ದನು. ಅವನೇ ಯೂದನು. ಅವನು ಯೇಸುವಿಗೆ ಮುದ್ದಿಡುವಷ್ಟು ಹತ್ತಿರ ಬಂದನು.


‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ.


ನಂತರ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಮಹಾಯಾಜಕರ ಬಳಿಗೆ ಹೋಗಿ,


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು