Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:18 - ಪರಿಶುದ್ದ ಬೈಬಲ್‌

18 (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 (ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಮಾನ್ಸಾನ್ ಅಪ್ನಾಚ್ಯಾ ಖೊಟ್ಯಾ ಕಾಮಾನ್ ಕಮ್ವಲ್ಲ್ಯಾ ಪೈಸ್ಯಾನ್ ಎಕ್ ಸೆತ್ ಇಕಾತ್ ಘೆಟ್ಲ್ಯಾನ್, ತ್ಯಾತುರ್ ತೊಂಡಾನಿ ಪಡುನ್ ತೆಚೆ ಪೊಟ್ ಫುಟ್ಲೆ ಅನಿ ತೆಚಿ ಸಗ್ಳಿ ಅಂತ್ಡಾ ಭಾಯ್ರ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:18
12 ತಿಳಿವುಗಳ ಹೋಲಿಕೆ  

ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.


ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.


ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.


ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು