Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:19 - ಪರಿಶುದ್ದ ಬೈಬಲ್‌

19 ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆರುಜಲೆಮಾತ್ ಜಿವನ್ ಕರ್‍ತಲ್ಯಾ ಸಗ್ಳ್ಯಾಕ್ನಿ ಹಿ ಖಬರ್ ಕಳ್ಳಿ, ಅಶೆ ತ್ಯಾ ಸೆತಾಕ್ ತೆಂಚ್ಯಾ ಬಾಶೆತ್ ಅಕೆಲ್ತಾಮಾ ಮಟ್ಲ್ಯಾರ್ ರಗ್ತಾಚೆ ಸೆತ್ ಮನುನ್ ನಾಂವ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:19
6 ತಿಳಿವುಗಳ ಹೋಲಿಕೆ  

ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.


ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.


ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ನನ್ನ ಬೆಲೆ ಅಷ್ಟೇ ಎಂದು ಅವರು ನೆನಸುತ್ತಾರೆ. ಆ ಹಣವನ್ನು ತೆಗೆದು ಆಲಯದ ಖಜಾನೆಗೆ ಸುರಿ.” ನಾನು ಆ ಮೂವತ್ತು ಬೆಳ್ಳಿ ನಾಣ್ಯವನ್ನು ತೆಗೆದುಕೊಂಡು ಆಲಯದ ಖಜಾನೆಗೆ ಸುರಿದೆನು.


ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು