Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:21 - ಪರಿಶುದ್ದ ಬೈಬಲ್‌

21-22 “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21-22 ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ರ್‍ಹಾತಾನಾ, ಧನಿ ಜೆಜು ಅಮ್ಚ್ಯಾ ಮದ್ದಿ ವಸ್ತಿ ಕರಿ ತ್ಯಾ ಎಳಾರ್ ಅಮ್ಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ ಮಾನ್ಸಾಕ್ ಎಚುನ್ ಕಾಡ್ತಲೆ ಗರ್ಜೆಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:21
9 ತಿಳಿವುಗಳ ಹೋಲಿಕೆ  

ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.


ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.


ಆದರೆ ಪ್ರಭು ಯೇಸುವಿನ ದೇಹವನ್ನು ಅವರು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು