Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:26 - ಪರಿಶುದ್ದ ಬೈಬಲ್‌

26 ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:26
15 ತಿಳಿವುಗಳ ಹೋಲಿಕೆ  

ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.


ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.


ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.


ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.


ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ಜನರು ತಮ್ಮ ಪ್ರದೇಶವನ್ನು ಯಾವ ವಿಧಾನದಿಂದ ಆರಿಸಿಕೊಳ್ಳಬೇಕೆಂಬುದರ ಬಗ್ಗೆ ಬಹುಕಾಲದ ಹಿಂದೆಯೇ ಯೆಹೋವನು ಮೋಶೆಗೆ ತಿಳಿಸಿದ್ದನು. ತಮ್ಮತಮ್ಮ ಪ್ರದೇಶಗಳನ್ನು ನಿರ್ಣಯಿಸಲು ಇಸ್ರೇಲಿನ ಒಂಭತ್ತುವರೆ ಕುಲಗಳ ಜನರು ಚೀಟುಹಾಕಿದರು.


“ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!


ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು.


ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು