Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:3 - ಪರಿಶುದ್ದ ಬೈಬಲ್‌

3 ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ನಾಚ್ಯಾ ಮರ್‍ನಾಚ್ಯಾ ಮಾನಾಚ್ಯಾ ಎಳಾರ್ ಅಪ್ನಿ ಅನಿ ಪರ್ತುನ್ ಝಿತ್ತೊ ಹೊಲಾ ಮನುನ್ ಸುಮಾರ್ ಖಾತ್ರಿಯಾಂಚ್ಯಾ ವೈನಾ ತೆನಿ ದಾಕ್ವುನ್ ದಿಲ್ಯಾನ್, ಅನಿ ತೊ ಚಾಳಿಸ್ ದಿಸ್ ಪತರ್ ತೆಂಚ್ಯಾ ನದ್ರೆಕ್ ಪಡ್ಲೊ, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚ್ಯಾಕ್ಡೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:3
27 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.


ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.


ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:


ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.


ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.


ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ.


ಯೇಸು ನಲವತ್ತು ದಿನ ಹಗಲಿರುಳು ಏನನ್ನೂ ತಿನ್ನಲಿಲ್ಲ. ಬಳಿಕ ಆತನಿಗೆ ಬಹಳ ಹಸಿವಾಯಿತು.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.


ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು