Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:1 - ಪರಿಶುದ್ದ ಬೈಬಲ್‌

1 ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸೆಜಾರೆಯ ಮನ್ತಲ್ಯಾ ಶಾರಾತ್ ಕೊರ್ನೆಲ್ ಮನ್ತಲೊ ಎಕ್ಲೊ ಹೊತ್ತೊ, ತೊ ಇಟಲಿ ಸೈನ್ಯಾಚೊ ಎಕ್ ಶತಾದಿಪತಿ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:1
19 ತಿಳಿವುಗಳ ಹೋಲಿಕೆ  

ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಸೈನಿಕರೆಲ್ಲರೂ ಯೇಸುವನ್ನು ಸುತ್ತುಗಟ್ಟಿದರು.


ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.


ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.


ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.


ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.


ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.


ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು.


ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.


ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.


ಅಲ್ಲಿ ಒಬ್ಬ ಸೇನಾಧಿಪತಿ ಇದ್ದನು. ಅವನ ಪ್ರಿಯ ಸೇವಕನೊಬ್ಬನು ಕಾಯಿಲೆಯಿಂದ ಸಾಯುವ ಸ್ಥಿತಿಯಲ್ಲಿದ್ದನು.


ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು.


ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.


ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು