Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:14 - ಪರಿಶುದ್ದ ಬೈಬಲ್‌

14 ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಪೇತ್ರನು - ಬೇಡವೇ ಬೇಡ ಸ್ವಾಮೀ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ ಅಶುದ್ಧಪದಾರ್ಥವನ್ನಾಗಲಿ ತಿಂದವನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಪೆದ್ರುನ್ “ಧನಿಯಾ ಮಿಯಾ ತಸೆ ಕರಿನಾ! ಭ್ರಸ್ಟ್ ಹೊಲ್ಲೆ ಅನಿ ಅಶುದ್ದ್ ಅಸಲ್ಲೆ ಮಿಯಾ ಕನ್ನಾಬಿ ಖಾಲ್ಲೊ ನ್ಹಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:14
19 ತಿಳಿವುಗಳ ಹೋಲಿಕೆ  

ಆದ್ದರಿಂದ ಶುದ್ಧವಾದ ಪ್ರಾಣಿಗಳನ್ನು ಅಶುದ್ಧವಾದ ಪ್ರಾಣಿಗಳಿಗಿಂತ ಭಿನ್ನವಾಗಿ ಕಾಣಬೇಕು. ನೀವು ಶುದ್ಧವಾದ ಪಕ್ಷಿಗಳನ್ನು ಅಶುದ್ಧವಾದ ಪಕ್ಷಿಗಳಿಗಿಂತ ಭಿನ್ನವಾಗಿ ಕಾಣಬೇಕು. ಆ ಅಶುದ್ಧವಾದ ಪಕ್ಷಿಗಳಲ್ಲಿ, ಪ್ರಾಣಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಪ್ರಾಣಿಗಳಲ್ಲಿ ಯಾವುದನ್ನೂ ತಿನ್ನಬೇಡಿರಿ. ನಾನು ಅವುಗಳನ್ನು ಅಶುದ್ಧವಾಗಿ ಮಾಡಿದ್ದೇನೆ.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.


“ಬುದ್ಧಿವಂತೆಯರು, ‘ಇಲ್ಲ! ನಮ್ಮಲ್ಲಿರುವ ಎಣ್ಣೆ ನಮಗೇ ಸಾಕಾಗದಿರಬಹುದು. ಅಂಗಡಿಗೆ ಹೋಗಿ ಕೊಂಡುಕೊಳ್ಳಿರಿ’ ಎಂದು ಉತ್ತರಕೊಟ್ಟರು.


ಆಗ ಪೇತ್ರನು ಯೇಸುವನ್ನು ಸ್ವಲ್ಪ ದೂರದಲ್ಲಿ ಕರೆದೊಯ್ದು, “ದೇವರು ನಿನ್ನನ್ನು ಕಾಪಾಡಲಿ, ನಿನಗೆಂದಿಗೂ ಹಾಗೆ ಸಂಭವಿಸದಿರಲಿ!” ಎಂದು ಪ್ರತಿಭಟಿಸಿದನು.


ಯಾಜಕರು ಸ್ವಾಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.


ನೀವು ನನಗೆ ವಿರೋಧವಾಗಿ ಸಂಚುಮಾಡುತ್ತಿರುವುದು ಈಗ ಸ್ಪಷ್ಟವಾಯಿತು” ಎಂದು ಹೇಳಿದನು. ಬಳಿಕ ಫರೋಹನು ಮೋಶೆ ಆರೋನರನ್ನು ಕಳುಹಿಸಿಬಿಟ್ಟನು.


ಆದರೆ ಲೋಟನು ಆ ಪುರುಷರಿಗೆ, “ಸ್ವಾಮಿಗಳೇ, ದಯವಿಟ್ಟು ಬಹುದೂರದವರೆಗೆ ಓಡಿಹೋಗುವಂತೆ ನಮ್ಮನ್ನು ಒತ್ತಾಯಿಸಬೇಡಿ.


ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದನು. ಅವನು ಯೇಸುವಿನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಇಷ್ಟಪಟ್ಟರೆ ನನ್ನನ್ನು ಗುಣಪಡಿಸಬಲ್ಲೆ” ಎಂದನು.


ಒಬ್ಬನು ಕಲುಷಿತನಾಗುವುದು ತನ್ನ ಬಾಯಿಂದ ತಿನ್ನುವ ಪದಾರ್ಥಗಳಿಂದಲ್ಲ. ಅವನ ಬಾಯಿಂದ ಬರುವ ಕೆಟ್ಟಮಾತುಗಳೇ ಅವನನ್ನು ಕಲುಷಿತಗೊಳಿಸುತ್ತವೆ” ಎಂದು ಹೇಳಿದನು.


ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ಆಗ ವಾಣಿಯೊಂದು, “ಪೇತ್ರನೇ, ಎದ್ದೇಳು! ಕೊಯ್ದು ತಿನ್ನು” ಎಂದು ಹೇಳಿತು.


“ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು