Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:24 - ಪರಿಶುದ್ದ ಬೈಬಲ್‌

24 ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮರುದಿನ ಅವನು ಕೈಸರೈಯಕ್ಕೆ ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಪ್ರಾಣವಿುತ್ರರನ್ನೂ ಕೂಡ ಕರಿಸಿ ಪೇತ್ರನನ್ನು ಎದುರುನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದುಸ್ರ್ಯಾಂದಿಸಿ ತೆನಿ ಸೆಜಾರೆಯ್ ಮನ್ತಲ್ಯಾ ಶಾರಾಕ್ ಪಾವ್ಲೆ ಕೊರ್ನೆಲ್ ತೆಂಚ್ಯಾಸಾಟ್ನಿ ರಾಕುನ್ಗೆತ್ ಹೊತ್ತೊ, ತೆನಿ ಅಪ್ಲ್ಯಾ ಬಳ್ಗಾಚ್ಯಾ ಲೊಕಾಕ್ನಿ ಅನಿ ಜಗೊಳ್ಲ್ಯಾ ವಾಂಗ್ಡಿಯಾಕ್ನಿ ತನ್ನಾಚ್ ಅಪ್ಲ್ಯಾ ಘರಾಕ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:24
14 ತಿಳಿವುಗಳ ಹೋಲಿಕೆ  

ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ರೋಮಿನ ಸೈನ್ಯಕ್ಕೆ ಸೇರಿದ “ಇಟಲಿಯ ದಳ”ದಲ್ಲಿ ಅವನು ಅಧಿಕಾರಿಯಾಗಿದ್ದನು.


ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು